...

ಚಂದ್ರನ ಹಡಗಿನಡಿ
ತಾವರೆಯ ಬೀಜಗಳು
ದಿಕ್ಕು ದಿಕ್ಕಿಗೆ ಚಲ್ಲಿವೆ
ಅದರ ಜಲವು ತುಟಿಗೆ
ತಾಕಿ ಎಚ್ಚರಾದಾಗ
ಚಲ್ಲಿದ ಬೀಜವು ಮೊಳಕೆ
ಒಡೆದಿತ್ತು

[ಜಪಾನೀಯರಲ್ಲಿ ಒಂದು ಸಂಪ್ರದಾಯವಿದೆಯಂತೆ.. ಒಬ್ಬ  ವ್ಯಕ್ತಿ ಸಾಯುವ ಸಮಯ ಬಂದಾಗ, ಒಂದು ಕವಿತೆಯನ್ನು ಬರೆಯಬೇಕಂತೆ. ಹಲವಾರು ಜೆನ್ ಋಷಿಗಳು, ಹೈಕು ಕವಿಗಳು ಹೀಗೆ ಬರೆದಿರುವ ಕವಿತೆಗಳನ್ನು ಓದುವಾಗ, ಅದರೊಟ್ಟಿಗೆ ಅವರ ಜೀವನ ಪದ್ಧತಿಗಳನ್ನು ಅಭ್ಯಾಸ ಮಾಡುವಾಗ, ನನಗಾದ ಅನುಭವದ ಅಕ್ಷರ ರೂಪ ಮೇಲಿನ ಕವಿತೆ. ]

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ